Bagepalli : ಬಾಗೇಪಲ್ಲಿ ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಗುರುವಾರ ಪೌರಕಾರ್ಮಿಕರ ದಿನಾಚರಣೆ (Poura Karmik Diwas) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂಧರ್ಭದಲ್ಲಿ ಮಾತನಾಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ “ಪಟ್ಟಣದಲ್ಲಿ ಸ್ವಚ್ಛತೆ ಮಾಡುವ ಪೌರಕಾರ್ಮಿಕರು ತಮ್ಮ ಆರೋಗ್ಯ ಕಾಪಾಡಲುಸುರಕ್ಷಿತವಾಗಿ ಇರಲು ಮುಖಗವಸು, ಕೈಗವಸು, ಕಾಲುಗಳಿಗೆ ಶೂ ಧರಿಸಬೇಕು. ಪೌರಕಾರ್ಮಿಕರಿಗೆ ನಿವೇಶನ, ವಿಧವೆಯರಿಗೆ ₹25ಸಾವಿರ, ಯುಪಿಎಸ್, ಸೂರು, ಕುಡಿಯುವ ನೀರಿನ ಯಂತ್ರ ವಿತರಿಸಲಾಗುವುದು. ಪೌರಕಾರ್ಮಿಕರ ಮಕ್ಕಳು ಐಎಎಸ್, ಐಪಿಎಸ್, ಕೆಎಎಸ್ ಉನ್ನತ ಹುದ್ದೆ ಪಡೆಯಬೇಕು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್, ಅಧಿಕಾರಿಗಳಾದ ಶ್ರೀಧರ್, ಅತಾವುಲ್ಲಾ, ಅರುಣ್, ಪುರಸಭಾ ಉಪಾಧ್ಯಕ್ಷೆ ಸುಜಾತಾನಾಯ್ಡು, ಸದಸ್ಯರಾದ ಎ.ನಂಜುಂಡಪ್ಪ, ಶ್ರೀನಿವಾಸರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.