Friday, September 20, 2024
HomeSidlaghattaBJPಯಿಂದ ಅ. 3 ರಂದು ಬೃಹತ್ ಪ್ರತಿಭಟನೆ

BJPಯಿಂದ ಅ. 3 ರಂದು ಬೃಹತ್ ಪ್ರತಿಭಟನೆ

- Advertisement -
- Advertisement -
- Advertisement -
- Advertisement -

Sidlaghatta : ಕೋಲಾರದಲ್ಲಿ ನಡೆದ ಜನತಾ ದರ್ಶನದಲ್ಲಿ ಸಂಸದ ಎಸ್.ಮುನಿಸ್ವಾಮಿ ಅವರ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಬಿಜೆಪಿಯಿಂದ ಅಕ್ಟೋಬರ್ 3 ರ ಮಂಗಳವಾರದಂದು ಕೋಲಾರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ತಿಳಿಸಿದರು.

ನಗರದ ಮಯೂರ ವೃತ್ತದಲ್ಲಿನ ಬಿಜೆಪಿಯ ಸೇವಾಸೌಧದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಸಂಸದ ಎಸ್.ಮುನಿಸ್ವಾಮಿ ಅವರನ್ನು ಕೋಲಾರದ ಎಸ್ಪಿ ಅವರು ಕಾರ್ಯಕ್ರಮದ ವೇದಿಕೆಯಿಂದ ತಳ್ಳಿಕೊಂಡು ಹೊರ ದಬ್ಬಿದರು. ಇದು ಜನಪ್ರತಿನಿಧಿಯೊಬ್ಬರ ಮೇಲೆ ದಬ್ಬಾಳಿಕೆ ಎಂದು ದೂರಿದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಕಾಂಗ್ರೆಸ್ಸಿಗರಿಗೆ ಅಧಿಕಾರದ ಮದ ನೆತ್ತಿಗೇರಿದೆ. ಅವರ ನಿಜವಾದ ಮುಖ ದರ್ಶನ ಆಗಿದೆ ಎಂದು ಕಾಂಗ್ರೆಸ್‌ನವರ ದೌರ್ಜನ್ಯದ ಪ್ರವೃತ್ತಿಯನ್ನು ಖಂಡಿಸಿದರು.

ಜನತಾ ದರ್ಶನದಲ್ಲಿ ಸಂಸದ ಮುನಿಸ್ವಾಮಿಯ ಮೇಲೆ ನಡೆದದ್ದು ಅವರೊಬ್ಬರ ಮೇಲೆ ನಡೆದ ದೌರ್ಜನ್ಯ ದಬ್ಬಾಳಿಕೆ ಅಲ್ಲ ಜನಪ್ರತಿನಿಧಿಯೊಬ್ಬರ ಮೇಲೆ ಅಧಿಕಾರಿಗಳ ಮೂಲಕ ಕಾಂಗ್ರೆಸ್ ಪಕ್ಷ ನಡೆಸಿದ ದಬ್ಬಾಳಿಕೆ ಎಂದು ದೂರಿದರು.

ಈ ವ್ಯವಸ್ಥೆಯನ್ನು, ಅಧಿಕಾರದಲ್ಲಿರುವವರ ದಬ್ಬಾಳಿಕೆಯ ಪ್ರವೃತ್ತಿಯನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವ ನಾವು ನೀವೆಲ್ಲರೂ ಖಂಡಿಸಬೇಕು. ಹಾಗಾಗಿ ಅ.3 ರಂದು ಮಂಗಳವಾರ ಕೋಲಾರದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುವುದು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿ ರಾಜ್ಯದ ಪ್ರಮುಖರು, ಜಿಲ್ಲಾ ಪ್ರಮುಖರು ಪ್ರತಿಭಟನೆಯನ್ನು ಭಾಗವಹಿಸಲಿದ್ದು ಶಿಡ್ಲಘಟ್ಟದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಮಾಜಿ ಶಾಸಕ ಎಂ.ರಾಜಣ್ಣ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ, ಸೀಕಲ್ ಆನಂದಗೌಡ, ಬಿ.ಸಿ.ನಂದೀಶ್, ಕನಕಪ್ರಸಾದ್, ಮುನಿರಾಜು, ನಗರಸಭೆ ಸದಸ್ಯ ನಾರಾಯಣಸ್ವಾಮಿ, ಅರಿಕೆರೆ ಮುನಿರಾಜು, ತ್ರಿವೇಣಿ ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
- Advertisment -

Most Popular

error: Content is protected !!