Chikkaballapur : ಚಿಕ್ಕಬಳ್ಳಾಪುರ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ನಗರಸಭೆ ಅಧ್ಯಕ್ಷರಾಗಿ ಎ.ಗಜೇಂದ್ರ ಮತ್ತು ಉಪಾಧ್ಯಕ್ಷರಾಗಿ ಜೆ.ನಾಗರಾಜ್ ಅಧಿಕಾರ ಸ್ವೀಕರಿಸಿದರು (CMC President Oath Taking) .
ನಗರಸಭೆ ನೂತನ ಅಧ್ಯಕ್ಷ ಎ.ಗಜೇಂದ್ರ ಮಾತನಾಡಿ “ಚಿಕ್ಕಬಳ್ಳಾಪುರ ಅಭಿವೃದ್ಧಿಗಾಗಿ ಎಲ್ಲರ ಸಹಕಾರ ಪಡೆಯುತ್ತೇವೆ. ಡಾ.ಕೆ.ಸುಧಾಕರ್ ಅವರು ನನ್ನನ್ನು ಮೂರು ಬಾರಿ ನಗರಸಭೆ ಸದಸ್ಯನನ್ನಾಗಿ ಮಾಡಿದ್ದಾರೆ. ಅವರು ಶಾಸಕರಾಗಿದ್ದ ಅವಧಿಯಲ್ಲಿ ಚಿಕ್ಕಬಳ್ಳಾಪುರ ಅಭಿವೃದ್ಧಿಗೆ ಶ್ರಮಿಸಿದ್ದು ಅವರ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗಲಾಗುವುದು” ಎಂದು ಹೇಳಿದರು.
ಈ ಸಂಧರ್ಭದಲ್ಲಿ ಸಂಸದ ಡಾ.ಕೆ.ಸುಧಾಕರ್, ಬಿಜೆಪಿ ಸದಸ್ಯರು, ಮುಖಂಡರು ಹಾಜರಿದ್ದರು.