Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇ-ಶ್ರಮ್ (e-Shram) ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್ ಭಾಗವಹಿಸಿದರು.
ಅಸಂಘಟಿತ ಕಾರ್ಮಿಕರು ಇ-ಶ್ರಮ್ ಯೋಜನೆಯಡಿ ನೋಂದಣಿ ಮಾಡಿಕೊವುಳ್ಳುವುದರಿಂದ ಅನೇಕ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವುದು. ಯೋಜನೆಯ ನೋಂದಣಿ ಕಾರ್ಯ ಆಗಸ್ಟ್ 26 ರಿಂದ ಪ್ರಾರಂಭವಾಗಿದ್ದು, ಕಾರ್ಮಿಕರು ಇ-ಶ್ರಮ್ ಪೋರ್ಟಲ್ ಮೂಲಕ ನೇರವಾಗಿ ನೋಂದಣಿ ಮಾಡಿಕೊಳ್ಳಬಹುದು. ಇದ್ದರಿಂದ ಆಕಸ್ಮಿಕ ಸಾವು ಅಥವಾ ಪೂರ್ಣ ಅಂಗವೈಕಲ್ಯಕ್ಕೆ ತುತ್ತಾದರೆ ₹ 2 ಲಕ್ಷ ಮತ್ತು ಭಾಗಶಃ ಅಂಗವೈಕಲ್ಯಕ್ಕೆ ₹ 1 ಲಕ್ಷ ಪರಿಹಾರ ಪಡೆಯಬಹುದು. ಇದರೊಂದಿಗೆ ಉಚಿತ ಆರೋಗ್ಯ ಸೇವೆ, ಕಾರ್ಮಿಕ ಕಲ್ಯಾಣ ನಿಧಿಯಿಂದ ಹಣಕಾಸಿನ ನೆರವು, ಮಕ್ಕಳಿಗೆ ಶೈಕ್ಷಣಿಕ ಸಾಲ, ವಿವಾಹ ಸಹಾಯ ಧನ, ಪಿಂಚಣಿ ಸೌಲಭ್ಯಗಳನ್ನು ಸಹ ಪಡೆಯಬಹುದಾಗಿದೆ ಎಂದು ಅಮರೇಶ್ ರವರು ತಿಳಿಸಿದರು.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur