Home News Chikkaballapur e-Shram ಜಿಲ್ಲಾ ಮಟ್ಟದ ಸಮಿತಿ ಸಭೆ

e-Shram ಜಿಲ್ಲಾ ಮಟ್ಟದ ಸಮಿತಿ ಸಭೆ

0
635
Chikkaballapur e-Shram Committee Meeting DC Office

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇ-ಶ್ರಮ್ (e-Shram) ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್ ಭಾಗವಹಿಸಿದರು.

ಅಸಂಘಟಿತ ಕಾರ್ಮಿಕರು ಇ-ಶ್ರಮ್ ಯೋಜನೆಯಡಿ ನೋಂದಣಿ ಮಾಡಿಕೊವುಳ್ಳುವುದರಿಂದ ಅನೇಕ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವುದು. ಯೋಜನೆಯ ನೋಂದಣಿ ಕಾರ್ಯ ಆಗಸ್ಟ್ 26 ರಿಂದ ಪ್ರಾರಂಭವಾಗಿದ್ದು, ಕಾರ್ಮಿಕರು ಇ-ಶ್ರಮ್ ಪೋರ್ಟಲ್ ಮೂಲಕ ನೇರವಾಗಿ ನೋಂದಣಿ ಮಾಡಿಕೊಳ್ಳಬಹುದು. ಇದ್ದರಿಂದ ಆಕಸ್ಮಿಕ ಸಾವು ಅಥವಾ ಪೂರ್ಣ ಅಂಗವೈಕಲ್ಯಕ್ಕೆ ತುತ್ತಾದರೆ ₹ 2 ಲಕ್ಷ ಮತ್ತು ಭಾಗಶಃ ಅಂಗವೈಕಲ್ಯಕ್ಕೆ ₹ 1 ಲಕ್ಷ ಪರಿಹಾರ ಪಡೆಯಬಹುದು. ಇದರೊಂದಿಗೆ ಉಚಿತ ಆರೋಗ್ಯ ಸೇವೆ, ಕಾರ್ಮಿಕ ಕಲ್ಯಾಣ ನಿಧಿಯಿಂದ ಹಣಕಾಸಿನ ನೆರವು, ಮಕ್ಕಳಿಗೆ ಶೈಕ್ಷಣಿಕ ಸಾಲ, ವಿವಾಹ ಸಹಾಯ ಧನ, ಪಿಂಚಣಿ ಸೌಲಭ್ಯಗಳನ್ನು ಸಹ ಪಡೆಯಬಹುದಾಗಿದೆ ಎಂದು ಅಮರೇಶ್ ರವರು ತಿಳಿಸಿದರು.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!