ಸವಿತಾ ಮಹರ್ಷಿ ಜಯಂತಿ ಆಚರಣೆ

- Advertisement -
- Advertisement -

Chikkaballpaur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ (Deputy Commissioner Office) ಹೆಚ್ಚುವರಿ ಜಿಲ್ಲಾಧಿಕಾರಿ ಎಚ್. ಅಮರೇಶ್ ರವರ ಉಪಸ್ಥಿತಿಯಲ್ಲಿ ಮಂಗಳವಾರ ಸವಿತಾ ಮಹರ್ಷಿ ಜಯಂತಿ (Savita Maharshi Jayanti) ಕಾರ್ಯಕ್ರಮ ನಡೆಯಿತು.

ಸವಿತಾ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಎಚ್. ಅಮರೇಶ್ ” ಶಿವನ ದಿವ್ಯ ದೃಷ್ಟಿಯಲ್ಲಿ ಜನ್ಮ ತಾಳಿದ ಸವಿತಾ ಮಹರ್ಷಿ ಬ್ರಹ್ಮಜ್ಞಾನ ಹೊಂದಿದ್ದರು ಕಷ್ಟದ ಸಮಸ್ಯೆಗಳನ್ನು ಎದುರಿಸಲು ವಿದ್ಯೆಯಿಂದ ಮಾತ್ರ ಸಾಧ್ಯ. ಅವರ ವಿಚಾರಗಳನ್ನು ಅಳವಡಿಸಿಕೊಂಡು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತರುವುದು ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಿದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಸವಿತಾ ಸಮಾಜ ಸಂಘದ ಕಾರ್ಯದರ್ಶಿ ಮುನಿನಾರಾಯಣಪ್ಪ, ಸವಿತಾ ಸಮಾಜ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ, ತಾಲ್ಲೂಕು ಘಟಕದ ಅಧ್ಯಕ್ಷ ನಟರಾಜು, ಸಮುದಾಯದ ಮುಖಂಡರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!