Tuesday, March 28, 2023
HomeNewsಕಳ್ಳರಿಂದ ₹ 22 ಲಕ್ಷ ಬೆಲೆ ಬಾಳುವ ಚಿನ್ನಾಭರಣ ವಶ

ಕಳ್ಳರಿಂದ ₹ 22 ಲಕ್ಷ ಬೆಲೆ ಬಾಳುವ ಚಿನ್ನಾಭರಣ ವಶ

- Advertisement -
- Advertisement -
- Advertisement -
- Advertisement -

hintamani: ಕಳ್ಳತನ ಆರೋಪದ ಮೇಲೆ ಬಂಧಿಸಲಾದ ಮೂವರು ಆರೋಪಿಗಳಿಂದ ಚಿಂತಾಮಣಿ ನಗರಠಾಣೆ ಪೊಲೀಸರು 300 ಗ್ರಾಂ ಬೆಳ್ಳಿ, 440 ಗ್ರಾಂ ತೂಕದ ಚಿನ್ನದ ಆಭರಣ ಸೇರಿ ಒಟ್ಟು ₹ 22 ಲಕ್ಷ ಬೆಲೆ ಬಾಳುವ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳು ಚಿಂತಾಮಣಿಯ ಬಾಬಾಜಾನ್ ಮತ್ತು ಬಂಗಾರಪೇಟೆ ತಾಲ್ಲೂಕಿನ ಶಿವಲಿಂಗ ಗ್ರಾಮದ ನಿವಾಸಿಗಳಾದ ಚಂದ್ರಪ್ಪ, ಗಂಗೋತ್ರಿ ಎಂದು ಗುರುತಿಸಲಾಗಿದೆ.

ಚಂದ್ರಪ್ಪ ತನ್ನ ಸಹಚರರಾದ ಗಂಗೋತ್ರಿ, ಬಾಬಜಾನ್ ಮತ್ತು ಮುನಿರಾಜು ಜತೆಗೂಡಿ 2-3 ತಿಂಗಳಿಂದ ರಾತ್ರಿ ವೇಳೆಯಲ್ಲಿ ಕಬ್ಬಿಣದ ರಾಡ್ ಗಳನ್ನು ಬಳಸಿ ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿ ಬೀಗ ಮುರಿದು ಕಳವು ಮಾಡುತ್ತಿದ್ದರು. ಚಿಂತಾಮಣಿ ನಗರದಲ್ಲಿ 10 ಕಡೆ, ಗ್ರಾಮಾಂತರ ವ್ಯಾಪ್ತಿಯಲ್ಲಿ 4 ಕಡೆ, ಶಿಡ್ಲಘಟ್ಟ ತಾಲ್ಲೂಕಿನಲ್ಲಿ 5 ಕಡೆ, ಬಂಗಾರಪೇಟೆ ತಾಲ್ಲೂಕಿನಲ್ಲಿ 2 ಕಡೆ ಕಳವು ಮಾಡಿರುವುದಾಗಿ ತನಿಖೆಯಲ್ಲಿ ಒಪ್ಪಿಕೊಂಡಿದ್ದಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಎಸ್‌ಪಿ ಮಿಥುನ್‌ಕುಮಾರ್‌ ತಿಳಿಸಿದರು.

ಆರೋಪಿಗಳನ್ನು ಪತ್ತೆ ಹಚ್ಚಲು ಡಿವೈಎಸ್‌ಪಿ ವಿ.ಲಕ್ಷ್ಮಯ್ಯ, ನಗರಠಾಣೆ ನಿರೀಕ್ಷಕ ನರೇಶ ನಾಯ್ಕ್‌, ಪಿಎಸ್‌ಐ ನಾರಾಯಣಸ್ವಾಮಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು ಎಂದು ಮಿಥುನ್‌ಕುಮಾರ್‌ ತಿಳಿಸಿದರು.

0.00 avg. rating (0% score) - 0 votes
- Advertisement -
RELATED ARTICLES
- Advertisment -

Most Popular

error: Content is protected !!