26.3 C
Bengaluru
Wednesday, February 18, 2026

DCC Bank ಮತ್ತು ಸಹಕಾರ ಸಂಘಗಳಲ್ಲಿ ಲೋಕಾಯುಕ್ತ ದಾಳಿ

- Advertisement -
- Advertisement -

Chintamani : ಚಿಂತಾಮಣಿ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ, ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ತಂಡವು ಮಂಗಳವಾರ DCC Bank ಹಾಗೂ ನಂದಿಗಾನಹಳ್ಳಿ, ಹುಲುಗುಮ್ಮನಹಳ್ಳಿ, ಕುರುಬೂರು ಮತ್ತು ಯನಮಲಪಾಡಿ ವ್ಯವಸಾಯ ಸೇವಾ ಸಹಕಾರ ಸಂಘಗಳಿಗೆ ದಾಳಿ ನಡೆಸಿತು (Lokayukta police raids) . ಈ ವೇಳೆ, ಅಧಿಕಾರಿಗಳು ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿದರು ಮತ್ತು ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು.

ದೂರುದಾರರ ಪ್ರಕಾರ, ನಕಲಿ ಸ್ತ್ರೀ ಶಕ್ತಿ ಸಂಘಗಳನ್ನು ಸೃಷ್ಟಿಸಿ, ಅವುಗಳಿಗೆ ಸಾಲ ಮಂಜೂರು ಮಾಡುವ ಮೂಲಕ ಕೋಟ್ಯಂತರ ರೂಪಾಯಿಗಳ ಲೂಟಿ ನಡೆದಿದೆ. ಇದರಲ್ಲಿ ಬ್ಯಾಂಕ್ ಆಡಳಿತ ಮಂಡಳಿಯ ಸದಸ್ಯರು ಸಹ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಪ್ರತಾಪ್ (ತಳಗವಾರ ಗ್ರಾಮ) ಮತ್ತು ಸೈಯದ್ ಮಾಲಿಕ್ ಪಾಷಾ (ನೆಕ್ಕುಂದಿ ಪೇಟೆ) ಅವರು ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು.

ಲೋಕಾಯುಕ್ತ ಅಧಿಕಾರಿಗಳು ಸಂಜೆಯವರೆಗೆ ಶೋಧ ಕಾರ್ಯಾಚರಣೆ ನಡೆಸಿದರು. ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!