Chikkaballapur : ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಆಶ್ರಯದಲ್ಲಿ ಮಂಗಳವಾರ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆಯ (D. Devaraj urs jayanthi) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಗೌರಿಬಿದನೂರು :

ಗೌರಿಬಿದನೂರು ನಗರದ ಮಿನಿ ವಿಧಾನಸೌಧದಲ್ಲಿ ದಿವಂಗತ ಡಿ.ದೇವರಾಜ ಅರಸು 109ನೇ ಜನ್ಮದಿನಾಚರಣೆ ಮತ್ತು ನಾರಾಯಣ ಗುರು ಜಯಂತಿಯನ್ನು ಮಂಗಳವಾರ ಆಚರಿಸಲಾಯಿತು.
ಚಿಂತಾಮಣಿ :

ಚಿಂತಾಮಣಿ ತಾಲ್ಲೂಕು ಆಡಳಿತ, ನಗರಸಭೆ, ತಾಲ್ಲೂಕು ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಮಂಗಳವಾರ ಅರಸು ಅವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.
ಬಾಗೇಪಲ್ಲಿ :

ಬಾಗೇಪಲ್ಲಿ ಪಟ್ಟಣದ ದೇವರಾಜು ಅರಸು ಭವನದಲ್ಲಿ ಮಂಗಳವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ದೇವರಾಜಅರಸು ಜನ್ಮದಿನಾಚರಣೆ ಹಾಗೂ ನಾರಾಯಣ ಗುರು ಜನ್ಮದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.