Home News Gauribidanur ಜನಸಂಪರ್ಕ ಸಭೆಯಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಭರವಸೆ

ಜನಸಂಪರ್ಕ ಸಭೆಯಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಭರವಸೆ

0
250
Gauribidanur Jana Samparka sabhe

Gauribidanur : ಗೌರಿಬಿದನೂರು ನಗರಗೆರೆ ಹೋಬಳಿಯ ವಾಟದಹೊಸಹಳ್ಳಿಯಲ್ಲಿ ಬುಧವಾರ ನಡೆದ ಜನಸಂಪರ್ಕ ಸಭೆಯಲ್ಲಿ ಸ್ಥಳೀಯ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಶಾಸಕ ಕೆ.ಎಚ್. ಪುಟ್ಟಸ್ವಾಮಿ ಗೌಡ (K. H. Puttaswamy Gowda) , “ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಬದ್ಧವಾಗಿದ್ದು, ಹಿಂದುಳಿದ ನಗರಗೆರೆ ಹೋಬಳಿಯ ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಲಾಗುವುದು” ಎಂದು ಭರವಸೆ ನೀಡಿದರು.

ತಹಶೀಲ್ದಾರ್ ಮಹೇಶ್ ಪತ್ರಿ ಮಾತನಾಡಿ, “ಈ ಭಾಗದ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಾಣಲು ಈ ಸಭೆ ಆಯೋಜಿಸಲಾಗಿದೆ. ಗ್ರಾಮ ಮಟ್ಟದ ಅಧಿಕಾರಿಗಳು ದಲ್ಲಾಳಿಗಳ ಹಾವಳಿಯನ್ನು ತಡೆಯಬೇಕು ಮತ್ತು ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡಬೇಕು” ಎಂದು ತಿಳಿಸಿದರು.

ಹೆಚ್ಚಿನ ಬಂಡವಾಳ ಹೂಡಿಕೆ:

ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೆ.ಕೆ. ಹೊನ್ನಯ್ಯ, “ನರೇಗಾ ಯೋಜನೆಯಡಿ ₹3.41 ಕೋಟಿ ಮತ್ತು ಗ್ರಾಮೀಣ ಅಭಿವೃದ್ಧಿಗೆ ₹7 ಕೋಟಿ ವ್ಯಯಿಸಲಾಗಿದೆ. ರೈತರು ಮತ್ತು ಮಹಿಳಾ ಸಂಘಗಳಿಗೆ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ. ತಾಲ್ಲೂಕಿನಲ್ಲಿ ಮಹಿಳೆಯರ ಮೂಲಕ 6 ಕಾಫಿ ಶಾಪ್ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ 248 ಅರ್ಜಿಗಳು ಸ್ವೀಕರಿಸಲ್ಪಟ್ಟಿದ್ದು, ಎಲ್ಲಾ ಸಮಸ್ಯೆಗಳಿಗೆ 15 ದಿನಗಳಲ್ಲಿ ಪರಿಹಾರ ಸೂಚಿಸುವ ಭರವಸೆ ನೀಡಲಾಯಿತು.

ತಹಶೀಲ್ದಾರ್ ಮಹೇಶ್ ಪತ್ರಿ, ಶ್ರೀನಿವಾಸ ಮೂರ್ತಿ, ಸುನೀತಾ, ಡಾ. ಮಾರುತಿ, ಮತ್ತು ತಾಲ್ಲೂಕು ಮಟ್ಟದ ಇತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!