Gauribidanur : ಗೌರಿಬಿದನೂರು ತಾಲ್ಲೂಕಿನ ಇಡಗೂರು ರಸ್ತೆಯ ಆದರ್ಶ ವಿದ್ಯಾಲಯದ (Adarsha Vidyalaya) 2021-22ನೇ ಸಾಲಿನ 7 ರಿಂದ 9ನೇ ತರಗತಿಗಳಲ್ಲಿ ರೋಸ್ಟರ್ ವಾರು ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಲು ಪ್ರವೇಶ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಗತ್ಯ ದಾಖಲೆಗಳೂಂದಿಗೆ ಸಲ್ಲಿಸಲು ಸೆಪ್ಟಂಬರ್ 24 ರಂದು ಕೊನೆಯ ದಿನಾಂಕವಾಗಿದ್ದು, ಅರ್ಜಿಗಳನ್ನು ಆದರ್ಶ ವಿದ್ಯಾಲಯದಲ್ಲಿ ಪಡೆಯಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕರಾದ ಹೆಚ್.ಎನ್. ವಿನುತಾ ಅವರನ್ನು 9901469006ರಲ್ಲಿ ಸಂಪರ್ಕಿಸಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಶ್ರೀನಿವಾಸಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.