26.3 C
Bengaluru
Tuesday, March 3, 2026

ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ

- Advertisement -
- Advertisement -

Gudibande : ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ (District Incharge secretary) ಮಂಜುಳ ಅವರು ಗುರುವಾರ ಗುಡಿಬಂಡೆ ತಾಲೂಕ್ಕಿನ ವರ್ಲಕೊಂಡ ಗ್ರಾಮದ ಅಂಗನವಾಡಿ, ಗ್ರಂಥಾಲಯಗಳಿಗೆ (Anganwadi) (library) ಭೇಟಿ (Visit) ನೀಡಿ ಪರಿಶೀಲಿಸಿದರು.

ಈ ಸಮಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಂಜುಳ “ಪ್ರವಾಸದ ನಿಮಿತ್ತ ಭೇಟಿ ನೀಡಿದ್ದು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಎಲ್ಲ ಸವಲತ್ತುಗಳನ್ನು ನೀಡಲಾಗುತ್ತಿದೆ. ಇನ್ನೂ ಗ್ರಂಥಾಲಯದಲ್ಲಿ ಹೆಚ್ಚಿನ ಸೌಲಭ್ಯಗಳು ಬೇಕಾಗಿದ್ದು ಈ ವಿಚಾರ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು” ಎಂದು ತಿಳಿಸಿದರು.

ಕೆರೆಗಳಲ್ಲಿ ಮಣ್ನು ತೆಗೆದು ಲೇಔಟ್ ನಿರ್ಮಾಣವಾಗುತ್ತಿದ್ದು ಕೆರೆಯಲ್ಲಿ ಅಕ್ರಮವಾಗಿ 20 ಅಡಿ ಆಳಕ್ಕೆ ಮಣ್ಣು ತೆಗೆಯುತ್ತಿದ್ದು ಇದರಿಂದ ಕೆರೆಕಟ್ಟೆ ಒಡೆಯಬಹುದು ಎಂದು ಗ್ರಾಮಸ್ಥರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗಮನಕ್ಕೆ ತಂದರು. ಈ ವಿಚಾರ ಜಿಲ್ಲಾಧಿಕಾರಿ ಸಭೆಯಲ್ಲಿ ಅಧಿಕಾರಿಗಳ ಗಮನಕ್ಕೆ ತಂದು ಅಕ್ರಮವಾಗಿ ಕೆರೆಯಲ್ಲಿ ಮಣ್ಣು ತೆಗೆಯುವವರ ಮೇಲೆ ಕ್ರಮಕೈಗೊಳ್ಳಲು ಸೂಚನೆ ನೀಡುವುದಾಗಿ ಮಂಜುಳ ಭರವಸೆ ನೀಡಿದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!