25.3 C
Bengaluru
Friday, October 18, 2024

ಕನಕದಾಸರ 536 ನೇ ಜಯಂತಿ ಸಿದ್ದತೆಗಳು

- Advertisement -
- Advertisement -

Sidlaghatta : ನವೆಂಬರ್ 30 ರ ಗುರುವಾರದಂದು ದಾಸಶ್ರೇಷ್ಠ ಕನಕದಾಸರ 536 ನೇ ಜಯಂತಿಯನ್ನು ಶಿಡ್ಲಘಟ್ಟದಲ್ಲಿ ಆಚರಿಸಲಾಗುತ್ತಿದ್ದು ಅದಕ್ಕೆ ಅಗತ್ಯ ಎಲ್ಲ ಸಿದ್ದತೆಗಳು ನಡೆಯುತ್ತಿವೆ ಎಂದು ಶಿಡ್ಲಘಟ್ಟ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಕೆ.ಮಂಜುನಾಥ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ನಾಡಹಬ್ಬಗಳ ಆಚರಣಾ ಸಮಿತಿ ಹಾಗೂ ಕುರುಬರ ಸಂಘದ ಆಶ್ರಯದಲ್ಲಿ ಕನಕದಾಸರ ಜಯಂತಿಯನ್ನು ಆಚರಿಸಲಾಗುತ್ತಿದೆ. ಕನಕ ಭಜನೆ ಮನೆಯಲ್ಲಿ ಪೂಜಾ ಕಾರ್ಯಕ್ರಮ, ವೇದಿಕೆ ಕಾರ್ಯಕ್ರಮ, ಪ್ರತಿಭಾವಂತರಿಗೆ ಪುರಸ್ಕಾರ, ನಾನಾ ಕ್ಷೇತ್ರದ ಸಾಧಕರಿಗೆ ಸನ್ಮಾನ, ಪಲ್ಲಕಿಗಳ ಉತ್ಸವ ನಡೆಯಲಿದೆ ಎಂದು ವಿವರಿಸಿದರು.

ನಗರದಲ್ಲಿನ ಕನಕ ಭಜನೆ ಮನೆಯಲ್ಲಿ ಕನಕದಾಸರ ಭಾವಚಿತ್ರಕ್ಕೆ 11 ಗಂಟೆಗೆ ಪೂಜೆ ಪುಷ್ಪನಮನ ಸಲ್ಲಿಕೆ ನಡೆಯಲಿದೆ. 12 ಗಂಟೆಗೆ ತಾಲ್ಲೂಕು ಕಚೇರಿ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಶಾಸಕ ಬಿ.ಎನ್.ರವಿಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕನಕದಾಸರ ಜೀವನ ಚರಿತ್ರೆ ಕುರಿತು ಭಾಷಣ, ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಕುರುಬ ಹಾಗೂ ಇತರೆ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ, ನಾನಾ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ನಡೆಯಲಿದೆ.

ವೇದಿಕೆ ಕಾರ್ಯಕ್ರಮದ ನಂತರ ತಾಲ್ಲೂಕಿನ ನಾನಾ ಕಡೆಯಿಂದ ಆಗಮಿಸಿದ ಕನಕದಾಸರ ಪಲ್ಲಕಿಗಳ ಉತ್ಸವವು ನಗರದ ಪ್ರಮುಖ ಬೀದಿಗಳಲ್ಲಿ ಸಾಗಲಿದೆ. ಡೊಳ್ಳು ಕುಣಿತ, ವೀರಗಾಸೆ, ಕೀಲು ಕುದುರೆ ಇನ್ನಿತರೆ ಕಲಾ ತಂಡಗಳು ಪಲ್ಲಕಿಯ ಮೆರವಣಿಗೆಯಲ್ಲಿ ಭಾಗವಹಿಸಲಿವೆ.

ಮುಖ್ಯವಾಗಿ ಕುರುಬ ಸಮುದಾಯ(ಹಾಲು ಮತಸ್ಥ)ದ ಪವಿತ್ರ ಆಚರಣೆ ತಲೆ ಮೇಲೆ ತೆಂಗಿನ ಕಾಯಿ ಒಡೆಯವು ಪವಾಡವು ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಭಾಗವಹಿಸಿ ಕನಕದಾಸರ ಜಯಂತಿಯನ್ನು ಯಶಸ್ವಿ ಮಾಡಬೇಕೆಂದು ಅವರು ಮನವಿ ಮಾಡಿದರು.

ಕುರುಬರ ಸಂಘದ ರಾಜ್ಯ ಮಾಜಿ ಉಪಾಧ್ಯಕ್ಷ ಎ. ನಾಗರಾಜ್, ತಾಲ್ಲೂಕು ಗೌರವಾಧ್ಯಕ್ಷ ಎಂ.ಗಣೇಶಪ್ಪ, ಪ್ರಧಾನ ಕಾರ್ಯದರ್ಶಿ ಎಂ.ರಾಮಾಂಜಿನಪ್ಪ, ಖಜಾಂಚಿ ಕೆ.ಸಿ.ನಾರಾಯಣಸ್ವಾಮಿ, ಮುಖಂಡರಾದ ಎ.ರಾಮಚಂದ್ರಪ್ಪ, ಸಿ.ರಾಮಣ್ಣ, ಮುನಿನಂಜಪ್ಪ, ಟೌನ್ ರಾಮು, ಹಿತ್ತಲಹಳ್ಳಿ ವೆಂಕಟೇಶ್, ಮೂರ್ತಿ, ಗಣೇಶ್ ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!