Home News Chikkaballapur ಜಿಲ್ಲೆಯಾದ್ಯಂತ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಜಿಲ್ಲೆಯಾದ್ಯಂತ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

0
511
Kempegowda Jayanthi Chelur

Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಎಲ್ಲಾ ತಾಲ್ಲೂಕು ಕಚೇರಿ ಹಾಗೂ ಸಂಘ ಸಂಸ್ಥೆಗಳಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು (Kempegowda Jayanthi) ಆಚರಿಸಲಾಯಿತು.

ಶಿಡ್ಲಘಟ್ಟ :

Kempegowda Jayanthi Sidlaghatta

ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಾಡ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಕೆಂಪೇಗೌಡ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆಚರಿಸಲಾಯಿತು.

ಚೇಳೂರು:

ಚೇಳೂರು ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪುಷ್ಪ ನಮನ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.

ಗೌರಿಬಿದನೂರು :

Kempegowda Jayanthi Gauribidanur

ಗೌರಿಬಿದನೂರು ತಾಲ್ಲೂಕಿನ ಮಿನಿ ವಿಧಾನಸೌಧದಲ್ಲಿ ಗುರುವಾರ ತಹಶೀಲ್ದಾ‌ರ್ ಮಹೇಶ್ ಪತ್ರಿ, ಕ್ಷೇತ್ರ ಶಿಕ್ಷಣಧಿಕಾರಿ ಶ್ರೀನಿವಾಸ ಮೂರ್ತಿ, ತಾಲ್ಲೂಕು ಆಡಳಿತ ಸಿಬ್ಬಂದಿ ನಾಡಪ್ರಭು ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳವಾಗಿ ಜಯಂತಿ ಆಚರಿಸಲಾಯಿತು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!