ಮುದ್ದೇನಹಳ್ಳಿಯಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿ (Muddenahalli) ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕೆಂಪೇಗೌಡ ಕಾನೂನು ವಿದ್ಯಾಲಯ, ಜಿಲ್ಲಾ ವಕೀಲರ ಸಂಘ, ಗ್ರಾ.ಪಂ.ಸೇರಿದಂತೆ ವಿವಿಧ ಘಟಕಗಳಿಂದ ಬುಧವಾರ ಕಾನೂನು ಅರಿವು ನೆರವು ಕಾರ್ಯಕ್ರಮ (Legal Awareness Program) ನಡೆಯಿತು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಅರುಣ ಕುಮಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾನೂನಿನ ತಿಳುವಳಿಕೆ ಮತ್ತು ಜ್ಞಾನ ಹೆಚ್ಚಿಸುವಲ್ಲಿ ಶಿಕ್ಷಣದ ಮಹತ್ವ ಸಾರಿದರು. ಕಾನೂನು ಸೇವಾ ಪ್ರಾಧಿಕಾರದ ಮೂಲಕ ಉಚಿತ ಕಾನೂನು ಸಲಹೆಗಳ ಲಭ್ಯತೆಯನ್ನು ಅವರು ಎತ್ತಿ ತೋರಿಸಿದರು, ಇದು ಸಾರ್ವಜನಿಕರಲ್ಲಿ ಕಾನೂನಿನ ಅರಿವು ಮೂಡಿಸಲು ಕೊಡುಗೆ ನೀಡುತ್ತದೆ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ನೆರವು ನೀಡುತ್ತದೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಜುಲೈ 8 ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ ಅದಾಲತ್ ಆಯೋಜಿಸುತ್ತಿದ್ದು, ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳಿರುವ ವ್ಯಕ್ತಿಗಳಿಗೆ ಶೀಘ್ರ ಪರಿಹಾರ ನೀಡುವ ಉದ್ದೇಶ ಹೊಂದಿದೆ.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಶ್ರೀನಿವಾಸ್ ಮಾತನಾಡಿ, ನಿತ್ಯ ಜೀವನಕ್ಕೆ ಕಾನೂನಿನ ಬಗ್ಗೆ ಮಾಹಿತಿ ಮತ್ತು ಅರಿವು ಹೊಂದುವುದು ಮಹತ್ವದ್ದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆಂಪೇಗೌಡ ಕಾನೂನು ವಿದ್ಯಾಲಯದ ಅಧ್ಯಕ್ಷ ಪಿ.ಎ.ಮೋಹನ್, ಸಂಸ್ಥೆಯ ಪ್ರಾಂಶುಪಾಲರಾದ ಬಿ.ಜಿ.ಶೋಭಾ, ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್.ಚಿನ್ನಪ್ಪರೆಡ್ಡಿ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮುರಳಿ ಮೋಹನ್, ಸಂಪನ್ಮೂಲ ವ್ಯಕ್ತಿಗಳಾದ ಮುನಿನಾರಾಯಣಪ್ಪ ಮುಂತಾದವರು ಇದ್ದರು. ಕಾರ್ಯಕ್ರಮದಲ್ಲಿ ಮುದ್ದೇನಹಳ್ಳಿ ಗ್ರಾ.ಪಂ ಅಧ್ಯಕ್ಷೆ ಛಾಯಾ, ಉಪಾಧ್ಯಕ್ಷರಾದ ಟಿ.ಡಿ.ಓ ಶ್ರೀನಿವಾಸ್, ಎಂ.ಎಸ್.ಜಯಸುಧಾ ಮತ್ತಿತರರು ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!