ಮಿನಿ ವಿಧಾನಸೌಧದಲ್ಲಿ ಲೋಕಾಯುಕ್ತ ಕುಂದುಕೊರತೆ ಸಭೆ

- Advertisement -
- Advertisement -

Gauribidanur : ಲೋಕಾಯುಕ್ತ ಡಿವೈಎಸ್‌ಪಿ (Lokayukta DySP) ವೀರೇಂದ್ರ ಕುಮಾರ್ ನೇತೃತ್ವದಲ್ಲಿ ಬುಧವಾರ ಗೌರಿಬಿದನೂರು ನಗರದ ಹೊರವಲಯದಲ್ಲಿರುವ ಮಿನಿ ವಿಧಾನ ಸೌಧದಲ್ಲಿ ಸಾರ್ವಜನಿಕ ಕುಂದುಕೊರತೆಗಳನ್ನು ಮತ್ತು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸಭೆಯನ್ನು (Public Meeting) ಆಯೋಜಿಸಲಾಗಿತ್ತು.

ಸರ್ಕಾರಿ ಪ್ರಕ್ರಿಯೆಗಳನ್ನು ಹೆಚ್ಚು ಪಾರದರ್ಶಕಗೊಳಿಸಲು ಮತ್ತು ಅಭಿವೃದ್ಧಿಯ ಪ್ರಯತ್ನಗಳನ್ನು ವೇಗಗೊಳಿಸಲು ಸ್ಥಳೀಯ ಮಟ್ಟದಲ್ಲಿ ಈ ಸಭೆಗಳನ್ನು ನಡೆಸಲಾಗುತ್ತದೆ ಎಂದು ವಿವರಿಸಿದ ವೀರೇಂದ್ರ ಕುಮಾರ್ ನವೆಂಬರ್ ನಂತರ ರಾಜ್ಯದಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವಿಸರ್ಜನೆಯಾಗಿದ್ದು, ಈಗ ಲೋಕಾಯುಕ್ತ ಇಲಾಖೆಗೆ ಅಂತಹ ವಿಷಯಗಳಲ್ಲಿ ಸಂಪೂರ್ಣ ಅಧಿಕಾರವಿದೆ. ಸಂಬಳ ಪಡೆಯುವ ಅಧಿಕಾರಿಗಳು ಅಥವಾ ಚುನಾಯಿತ ಪ್ರತಿನಿಧಿಗಳು ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದಂತೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸಲು ಹಣವನ್ನು ಕೇಳಿದರೆ, ಜನರು ವರದಿ ಮಾಡಬೇಕು. ಲಂಚ ಕೇಳುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.

ಸಭೆಯಲ್ಲಿ ನಾಗರಿಕರು ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯ ಒಟ್ಟು 40 ದೂರುಗಳನ್ನು ಮುಂದಿಟ್ಟರು. ಈ ಪೈಕಿ 15 ಪ್ರಕರಣಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲಾಗಿದ್ದು, ಉಳಿದ 25 ಪ್ರಕರಣಗಳನ್ನು ಶೀಘ್ರ ಇತ್ಯರ್ಥಕ್ಕಾಗಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಮಹೇಶ್ ಎಸ್ ಪತ್ರಿ, ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ಮೋಹನ್, ಪೌರಾಯುಕ್ತ ಡಿ.ಎಂ ಸೇರಿದಂತೆ ಸ್ಥಳೀಯ ಅಧಿಕಾರಿಗಳು ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!