Chikkaballapur : ಚಿಕ್ಕಬಳ್ಳಾಪುರ ನಗರದ ಸರ್ ಎಂವಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಟೋ ಚಾಲಕರ ಮಕ್ಕಳಿಗೆ ತಲಾ ₹5 ಸಾವಿರ ನಗದು ವಿತರಿಸಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಟೀಕೆಗಳನ್ನು ಲೆಕ್ಕಿಸದೆ ಕ್ಷೇತ್ರದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುವುದು ತಮ್ಮ ಗುರಿಯಾಗಿದೆ ಎಂದು ಹೇಳಿದರು.
ಶಾಸಕನಾಗಿ ಆಯ್ಕೆಯಾಗಿರುವುದೇ ಲಾಟರಿ. ಇತರೆ ರಾಜಕಾರಣಿಗಳಂತೆ ಇದರಿಂದ ಅಭದತ್ರೆ ಇಲ್ಲ. ಈ ನಿಟ್ಟಿನಲ್ಲಿ ಇನ್ನೂ 30 ವರ್ಷ ಅಧಿಕಾರ ಎನ್ನದೆ, ಐದು ವರ್ಷ ಕ್ಷೇತ್ರದ ಜನತೆಗೆ ಅಗತ್ಯವಿರುವ ಸೇವೆ ಮಾಡುವುದಷ್ಟೇ ನನ್ನ ಗುರಿ. ಚುನಾವಣೆಗೆ ಇನ್ನೂ ನಾಲ್ಕೂವರೆ ವರ್ಷ ಬಾಕಿ ಇರುವುದರಿಂದ ಚುನಾವಣಾ ತಂತ್ರಕ್ಕಾಗಿ ಈ ರೀತಿ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ ಶಾಸಕರು. ಬದಲಾಗಿ ಮತದಾರರ ಸಮಸ್ಯೆಗಳ ಪರಿಹಾರ ಹಾಗೂ ಅಭಿವೃದ್ಧಿ ಯೋಜನೆಗಳತ್ತ ಗಮನ ಹರಿಸಬೇಕೆಂದರು.
ಕಾರ್ಯಕ್ರಮದಲ್ಲಿ ಅನೇಕ ಆಟೋ ಚಾಲಕರು, ಮುಖಂಡರು ಭಾಗಿಯಾಗಿದ್ದರು.