23.8 C
Bengaluru
Wednesday, February 25, 2026

MUDA ಹಗರಣದಲ್ಲಿ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ : Y.A.ನಾರಾಯಣಸ್ವಾಮಿ

- Advertisement -
- Advertisement -

Kolar : ಮುಡಾ, ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ (MUDA Scam) ಆರೋಪಿಸಿ ಕೋಲಾರ ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ವಿಧಾನ ಪರಿಷತ್‌ ಮಾಜಿ ಸಚೇತಕ ಬಿಜೆಪಿ ಮುಖಂಡ ವೈ.ಎ.ನಾರಾಯಣಸ್ವಾಮಿ (Dr Y A Narayanaswamy) ಸುದ್ದಿಗೋಷ್ಠಿ (Press Meet) ನಡೆಸಿದರು.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 14 ತಿಂಗಳಾಗಿದ್ದು, ಕಮಿಷನ್ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ‌. ವಾಲ್ಮೀಕಿ ನಿಗಮದ ₹ 187 ಕೋಟಿ ದುರುಪಯೋಗವಾಗಿದ್ದು, ಈಗ ಬಿಡಿಎ‌ ಮೀರಿಸುವ ಹಗರಣ ಮುಡಾದಲ್ಲಿ ನಡೆದಿದೆ. ಸಿದ್ದರಾಮಯ್ಯ ಮುಡಾ ಆಡಳಿತ ಮಂಡಳಿಯ ಸದಸ್ಯರಾಗಿದ್ದು ಅವರಿಗೆ ಗೊತ್ತಿಲ್ಲದೇ ಇಷ್ಟೆಲ್ಲಾ ಹಗರಣ ನಡೆದಿದೆಯೇ? ಈ ಹಗರಣದಲ್ಲಿ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂದು ವೈ.ಎ.ನಾರಾಯಣಸ್ವಾಮಿ ಆಪಾದಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್‌, ಮಾಧ್ಯಮ ಪ್ರಮುಖ್‌ ಪ್ರವೀಣ್ ಗೌಡ, ಸಹ ಪ್ರಮುಖ್‌ ಕೆಂಬೋಡಿ, ಮಾಗೇರಿ ನಾರಾಯಣಸ್ವಾಮಿ, ತಿಮ್ಮರಾಯಪ್ಪ, ಮಾಲೂರು ವೇಮಣ್ಣ, ಶಿಳ್ಳಂಗೆರೆ ಮಹೇಶ್, ರಾಜೇಶ್ ಸಿಂಗ್, ಓಹಿಲೇಶ್ ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!