ಗ್ರಾಮಗಳ ಅಭಿವೃದ್ಧಿ ಕುರಿತು ZP CEO ಸಂವಾದ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಚಿಕ್ಕಬಳ್ಳಾಪುರ ಹಾಗೂ ಗುಡಿಬಂಡೆ ಗ್ರಾ.ಪಂ ಯ (Gram panchayat) ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸಭೆ (Meeting) (Newly Elected) ನಡೆಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು, “ಗ್ರಾಮ ಪಂಚಾಯತ್ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಆರಂಭಿಕ ಹಂತವಾಗಿದೆ. ಗಾಂಧೀಜಿಯವರ ಸ್ವಾವಲಂಬಿ ಗ್ರಾಮಗಳ ಕಲ್ಪನೆಯನ್ನು ಈಡೇರಿಸಲು, ಈ ಪ್ರದೇಶಗಳನ್ನು ಅಭಿವೃದ್ಧಿಪಡಿಸುವುದು ನಿರ್ಣಾಯಕ.
ಗ್ರಾಮಗಳ ಪರಿಣಾಮಕಾರಿ ಅಭಿವೃದ್ಧಿಗೆ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒ, ಸದಸ್ಯರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ತಿಳಿಸಿ, ಅಧಿಕಾರ ದುರುಪಯೋಗ ಪಡಿಸಿಕೊಳ್ಳದೆ ಜವಾಬ್ದಾರಿಯುತವಾಗಿ ಅಧಿಕಾರ ಚಲಾಯಿಸಿ ಗ್ರಾಮಗಳ ಪ್ರಗತಿಗೆ ಚಾಲನೆ ನೀಡಬೇಕು” ಎಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಭಾಸ್ಕರ್, ಚಿಕ್ಕಬಳ್ಳಾಪುರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ಆರ್. ಮಂಜುನಾಥ್, ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಅಧಿಕಾರಿಗಳು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!