Chikkaballapur : ಕನ್ನಡ ಸಾಹಿತ್ಯ ಪರಿಷತ್ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾಗಿ ಪ್ರೊ.ಕೋಡಿ ರಂಗಪ್ಪ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಕೈವಾರ ಶ್ರೀನಿವಾಸ್ ಅವರಿಗಿಂತ ಹೆಚ್ಚು ಮತಗಳನ್ನು ಪಡೆದು 2,379 ಮತಗಳ ಅಂತರದಿಂದ ಜಯಶೀಲರಾಗಿದ್ದಾರೆ.
ಜಿಲ್ಲೆಯಾದ್ಯಂತ ಒಟ್ಟು 4461 ಮತದಾರರು ಹಕ್ಕು ಚಲಾಯಿಸಿದ್ದು, ಪ್ರೊ.ಕೋಡಿ ರಂಗಪ್ಪ ರವರಿಗೆ 3420 ಮತಗಳು , ಮಾಜಿ ಜಿಲ್ಲಾಧ್ಯಕ್ಷ ಕೈವಾರ ಶ್ರೀನಿವಾಸ್ ರವರಿಗೆ 1041 ಮತಗಳು ದೊರೆತಿವೆ.
ವಿಜಯದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಪ್ರೊ.ಕೋಡಿ ರಂಗಪ್ಪ ” ಜಿಲ್ಲೆಯ ಸಾಹಿತ್ಯಾಸಕ್ತರು, ನಿಕಟ ಪೂರ್ವ ಅಧ್ಯಕ್ಷರು, ವಿವಿಧ ಸಂಘಟನೆಗಳ ಮುಖಂಡರು ಒಮ್ಮತ ದಿಂದ ನನ್ನನ್ನು ಸ್ಪರ್ಧೆ ಮಾಡುವಂತೆ ಒತ್ತಾಯಿಸಿದ್ದರು. ಹೆಚ್ಚಿನ ಮುನ್ನಡೆಯಿಂದ ಜಿಲ್ಲೆಯ ಸಾಹಿತ್ಯಾಸಕ್ತರು ನನನ್ನು ಗೆಲಿಸಿರುವುದು ನನಗೆ ಅತೀವ ಸಂತೋಷವನ್ನು ತಂದಿದೆ. ನಾಡು, ನುಡಿ ವಿಚಾರವಾಗಿ ರಾಜ್ಯ ಮಟ್ಟದಲ್ಲಿ ನಡೆಯುವ ಹೋರಾಟಗಳಿಗೆ ನಾವು ಸಹ ಬೆಂಬಲವಾಗಿ ನಿಲ್ಲಿ ಹೋರಾಟಗಾರರ ಕೈ ಬಲಪಡಿಸಬೇಕು. ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಈಗಾಗಲೇ ಕ್ರಮವಹಿಸಲಾಗಿದ್ದು, ಸಚಿವರು ಹಾಗೂ ಎಲ್ಲಾ ಶಾಸಕರ ಸಹಕಾರದಲ್ಲಿ ಈ ಕಾರ್ಯವನ್ನು ಪೂರ್ಣಗೊಳಿಸಲಾಗುವುದು. ಎಲ್ಲಾ ತಾಲ್ಲೂಕುಗಳಲ್ಲಿಯೂ ಕನ್ನಡ ಭವನವನ್ನು ನಿರ್ಮಿಸಿ, ಪಂಚಾಯಿತಿ, ಹೋಬಳಿ ಮಟ್ಟದಲ್ಲಿ ಸಾಹಿತ್ಯ ಸಮ್ಮೇಳನ ನಡೆಸುವ ಬಗ್ಗೆ ಚರ್ಚಿಸಲಾಗುವುದು ” ಎಂದು ತಿಳಿಸಿದರು.
Facebook: https://www.facebook.com/hicbpur
Twitter: https://twitter.com/hicbpur
Your email address will not be published. Required fields are marked *
Save my name, email, and website in this browser for the next time I comment.
2021 Chikkaballapur.com