Chikkaballapur : ಶಿಡ್ಲಘಟ್ಟ ತಾಲ್ಲೂಕಿನ ದೇವಗಾನಹಳ್ಳಿ ಗ್ರಾಮಸ್ಥರು ಸಾದಲಿ ಹೋಬಳಿಯ ಎಸ್.ದೇವಗಾನಹಳ್ಳಿ ರಾಮಸಮುದ್ರ ಕೆರೆಯ (RamSamudra) ನೀರನ್ನು ಶಿಡ್ಲಘಟ್ಟ (Sidlaghatta drinking water project) ನಗರಕ್ಕೆ ಪೂರೈಸಲು ಜಿಲ್ಲಾಡಳಿತ ಮುಂದಾಗಿದ್ದು ತಕ್ಷಣವೇ ಈ ಯೋಜನೆ ಕೈಬಿಡಬೇಕು ಎಂದು ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಅವರಿಗೆ ಬುಧವಾರ ಮನವಿ (Devagaanahalli villagers protest) ಸಲ್ಲಿಸಿದರು.
ರಾಮಸಮುದ್ರ ಕೆರೆಯು 1889ರಲ್ಲಿ ಸ್ಥಾಪನೆಯಾಗಿದೆ. 1894ರಲ್ಲಿ ಉದ್ಘಾಟನೆಯಾಗಿದ್ದು ಕೃಷಿ ಬಳಕೆಗೆ ಎಂದೇ ಈ ಕೆರೆ ನಿರ್ಮಿಸಲಾಗಿದೆ. ಆದರೆ ಈಗ ಜಿಲ್ಲಾಡಳಿತ ಶಿಡ್ಲಘಟ್ಟ ನಗರಕ್ಕೆ ಇಲ್ಲಿಂದ ಕುಡಿಯುವ ನೀರು ಪೂರೈಸಲು ಯೋಜನೆ ರೂಪಿಸುತ್ತಿದೆ. ಇದನ್ನು ತಕ್ಷಣವೇ ಕೈ ಬಿಡಬೇಕು. ಯಾವುದೇ ರೀತಿಯ ನಾಲೆಗಳು ಈ ಭಾಗದಲ್ಲಿ ಇಲ್ಲ. ಈ ಕೆರೆಯೇ ಜಲಮೂಲಕ್ಕೆ ಆಧಾರ. ಇಲ್ಲಿನ ರೈತರಲ್ಲಿ ಶೇ 70ರಷ್ಟು ಬಡವರು, ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದವರು ಇದ್ದಾರೆ. ಈ ಕೆರೆ ನಂಬಿ ಜೀವನ ಸಾಗಿಸುತ್ತಿದ್ದಾರೆ. ತಾವು ಈ ಬಗ್ಗೆ ಸಮಗ್ರವಾಗಿ ಪರಿಶೀಲಿಸಬೇಕು. ಕುಡಿಯುವ ನೀರು ಪೂರೈಕೆ ಯೋಜನೆ ಕೈ ಬಿಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಜಾಗೃತ ಮತ್ತು ಮೇಲುಸ್ತುವಾರಿ ಸಮಿತಿ ಮಾಜಿ ಸದಸ್ಯ ಡಿ.ವಿ ಪ್ರಸಾದ್, ಸೀತಾರಾಮಪ್ಪ, ಎಂ.ನರಸಿಂಹರೆಡ್ಡಿ, ಮುನಿರಾಜು ವೈ.ವಿ., ಗ್ರಾ.ಪಂ ಮಾಜಿ ಸದಸ್ಯ ವಿ.ವೆಂಕಟೇಶಪ್ಪ, ಹನುಮಪ್ಪ ಬಿ., ನಾಗೇಶ್, ಚಂದ್ರಶೇಖರ್, ಪ್ರದೀಪ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.