22.5 C
Bengaluru
Friday, May 16, 2025

ಪ್ರಾದೇಶಿಕ ಅಸಮತೋಲನ ನಿವಾರಣೆ ಸಭೆ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ Sir MV ಸಭಾಂಗಣದಲ್ಲಿ ಗುರುವಾರ ಬೆಂಗಳೂರು ವಿಭಾಗ ಮಟ್ಟದ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ (Regional Imbalance Committee) ಸಂವಾದ ಸಭೆ (meeting) ಮತ್ತು ಶಿಫಾರಸು ಸ್ವೀಕಾರ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಹಾಗೂ ಆರ್ಥಿಕ ತಜ್ಞ ಪ್ರೊ. ಎಂ.ಗೋವಿಂದ ರಾವ್ ಮಾತನಾಡುತ್ತಾ, ರಾಜ್ಯದ ವಿವಿಧ ಜಿಲ್ಲೆಗಳ ಮಾಹಿತಿಗಳನ್ನು ಸಂಗ್ರಹಿಸಿ, 2025ರ ಸೆಪ್ಟೆಂಬರ್ ವೇಳೆಗೆ ಸರ್ಕಾರಕ್ಕೆ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಂಬಂಧಿಸಿದ ಶಿಫಾರಸು ವರದಿ ನೀಡಲಾಗುವುದು. ಈ ಬಗ್ಗೆ 2002ರ ಡಾ.ಡಿ.ಎಂ. ನಂಜುಂಡಪ್ಪ ಸಮಿತಿಯ ವರದಿಯನ್ನು ಉಲ್ಲೇಖಿಸಿ, ಆ ವೇಳೆ ರಾಜ್ಯದ 114 ತಾಲ್ಲೂಕುಗಳನ್ನು ಹಿಂದುಳಿದ ಮಟ್ಟದ ಆಧಾರದ ಮೇಲೆ ವಿಭಾಗಿಸಿ, ₹31,000 ಕೋಟಿ ಅನುದಾನ ನೀಡಬೇಕೆಂಬ ಶಿಫಾರಸು ಮಾಡಲಾಗಿತ್ತು. ಈ ಬಾರಿ ಕೂಡ ಜಿಲ್ಲೆಗಳ ಅಧಿಕಾರಿಗಳು, ಸರ್ಕಾರೇತರ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ಬರುವ ಲೇಖಿತ ಶಿಫಾರಸುಗಳು, ಅಭಿಪ್ರಾಯಗಳು ಎಲ್ಲವನ್ನೂ ಪರಿಶೀಲಿಸಲಾಗುತ್ತಿದೆ. ನೀರಾವರಿ, ಕೃಷಿ, ತೋಟಗಾರಿಕೆ, ರೇಷ್ಮೆ ಉತ್ಪನ್ನಗಳ ಬಗ್ಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಹೀಗೆಯೇ ಬಾಲ್ಯ ವಿವಾಹ ತಡೆ ಕುರಿತು ಹಲವು ಸಲಹೆಗಳೂ ಬಂದಿವೆ. ಈ ಶಿಫಾರಸುಗಳ ಮೂಲಕ ತಲಾದಾಯ, ಆರೋಗ್ಯ, ಶಿಕ್ಷಣ ಮತ್ತು ಸುಸ್ಥಿರ ಅಭಿವೃದ್ಧಿಗೆ ಪೂರಕವಿರುವ ಯೋಜನೆಗಳನ್ನು ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಸಮಿತಿಯ ಕಾರ್ಯದರ್ಶಿ ಡಾ. ಆರ್. ವಿಶಾಲ್, ಸದಸ್ಯರಾದ ಡಾ. ಸಿದ್ದಪ್ಪ ಟಿ. ಬಾಗಲಕೋಟೆ, ಕೆ.ಎನ್. ಸಂಗೀತಾ ಕಟ್ಟಿಮನಿ, ಡಾ. ಎಂ.ಎಚ್. ಸೂರ್ಯನಾರಾಯಣ್, ಯೋಜನಾ ನಿರ್ದೇಶಕ ಚಂದ್ರಶೇಖರಯ್ಯ, ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾ ಪಂಚಾಯಿತಿ ಸಿಇಒ ಪ್ರಕಾಶ್ ಜಿ.ಟಿ. ನಿಟ್ಟಾಲಿ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!