Home Sidlaghatta ವಿಶ್ವಗುರು ಮೋದಿಯವರನ್ನು ಸೋಲಿಸುವ ಹುನ್ನಾರ ಎಂದಿಗೂ ಯಶಸ್ವಿಯಾಗದು : ಸೀಕಲ್ ರಾಮಚಂದ್ರಗೌಡ

ವಿಶ್ವಗುರು ಮೋದಿಯವರನ್ನು ಸೋಲಿಸುವ ಹುನ್ನಾರ ಎಂದಿಗೂ ಯಶಸ್ವಿಯಾಗದು : ಸೀಕಲ್ ರಾಮಚಂದ್ರಗೌಡ

0

Sidlaghatta : ದೇಶದ ಎಲ್ಲ ಜಾತಿ, ಧರ್ಮ, ರಾಜಕೀಯ ಶಕ್ತಿಗಳು ಒಗ್ಗೂಡಿ ಷಡ್ಯಂತರ ನಡೆಸಿದರೂ ವಿಶ್ವಗುರು ಮೋದಿ ಅವರನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂಬುದು ಈ ಸಂಸತ್ ಚುನಾವಣೆಯಲ್ಲಿ ದೇಶದ ಮತದಾರರು ಮತ್ತೊಮ್ಮೆ ಸಾಭೀತು ಮಾಡಿದ್ದಾರೆ ಎಂದು ಶಿಡ್ಲಘಟ್ಟದ ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ತಿಳಿಸಿದರು.

ಶಿಡ್ಲಘಟ್ಟ ನಗರದಲ್ಲಿನ ಬಿಜೆಪಿಯ ಸೇವಾ ಸೌಧ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೋದಿ ವಿರುದ್ದ ಈ ದೇಶದ ಎಲ್ಲ ಶಕ್ತಿಗಳು ಒಗ್ಗೂಡಿ ಸೋಲಿಸಲು ಇನ್ನಿಲ್ಲದ ಕಸರತ್ತು ನಡೆಸಿದರೂ ಅದು ಸಾಧ್ಯವಾಗಲಿಲ್ಲ. ಅದು ವಿಶ್ವಗುರು ಮೋದಿ ಅವರ ತಾಕತ್ತು ಎಂದರು.

ಈ ದೇಶದ ಮತದಾರರು ಕೊಟ್ಟ ತೀರ್ಪನ್ನು ಸ್ವಾಗತಿಸುತ್ತೇವೆ. ಮೂರನೇ ಭಾರಿಗೆ ಮತ್ತೊಮ್ಮೆ ಮೋದಿ ಅವರು ಈ ದೇಶದ ಪ್ರಧಾನಿ ಆಗಲಿದ್ದು ದೇಶವನ್ನು ಜಗತ್ತಿನಲ್ಲಿ ಅಭಿವೃದ್ದಿ ಹೊಂದಿದ ಒಂದನೇ ದೇಶವನ್ನಾಗಿ ಮಾಡುವುದು ಖಚಿತ ಎಂದರು.

ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿಯು ಮುಂದಿನ ಎಲ್ಲ ಚುನಾವಣೆಗಳಲ್ಲೂ ಮುಂದುವರೆಯಲಿದೆ, ಈ ನಾಡಿನ ಮತದಾರರು ಈ ಎರಡೂ ಪಕ್ಷಗಳ ಮೈತ್ರಿಯನ್ನು ಒಪ್ಪಿದ್ದು ಅದರ ಪರಿಣಾಮವೇ ಈ ಚುನಾವಣೆಯ ಫಲಿತಾಂಶವಾಗಿದೆ ಎಂದು ವಿವರಿಸಿದರು.
ಮಾಜಿ ಶಾಸಕ ಎಂ.ರಾಜಣ್ಣ, ಮುಖಂಡರಾದ ಸೀಕಲ್ ಆನಂದಗೌಡ, ಕಂಬದಹಳ್ಳಿ ಸುರೇಂದ್ರಗೌಡ, ನರೇಶ್, ಇನ್ನಿತರರು ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version