30.1 C
Bengaluru
Monday, May 12, 2025

ನ್ಯಾಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ

- Advertisement -
- Advertisement -

Sidlaghatta : ಅಂಬೇಡ್ಕರ್ ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕು. ಅವರ ಜಯಂತಿಯಂದು ಮಾತ್ರ ನಾವು ಸ್ಮರಿಸದೆ ದಿನನಿತ್ಯ ಅವರನ್ನು ಸ್ಮರಿಸುವಂತಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ತಿಳಿಸಿದರು.

ನಗರದ ನ್ಯಾಯಾಲಯದಲ್ಲಿ ಬುಧವಾರ ತಾಲ್ಲೂಕು ವಕೀಲರ ಸಂಘದಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳನ್ನು ನೀಡಿದ್ದಾರೆ. ನಮ್ಮ ರಕ್ಷಣೆಗೆ ಕಾನೂನುಗಳನ್ನು ನೀಡಿದ್ದಾರೆ. ಇವೆಲ್ಲವನ್ನು ನಾವು ಅರಿತುಕೊಳ್ಳಬೇಕಿದೆ. ನಾವು ಪಾಲಿಸಬೇಕಾದ ಮೂಲಭೂತ ಕರ್ತವ್ಯಗಳನ್ನು ಮರೆತಿದ್ದೇವೆ. ಆದ್ದರಿಂದ ನಾಗರಿಕರಾಗಿ ಪ್ರಾಮಾಣಿಕವಾಗಿ ಕಾನೂನುಗಳನ್ನು ಅರಿತು ಗೌರವಿಸಬೇಕು. ಸಂವಿಧಾನ ಆಶಯಗಳು ಹಾಗೂ ಸಾರ್ವಭೌಮತ್ವಕ್ಕೆ ಧಕ್ಕೆ ಆಗದಂತೆ ನಡೆದುಕೊಳ್ಳಬೇಕು ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶೆ ಪೂಜಾ.ಜೆ, ಅಪರ ಸಿವಿಲ್ ನ್ಯಾಯಾಧೀಶೆ ರಂಜಿತ. ಎಸ್, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಎ.ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ.ಭಾಸ್ಕರ್, ಹಿರಿಯ ವಕೀಲ ಎಂ.ಪಾಪಿರೆಡ್ಡಿ, ಸಿ.ಡಿ.ಪಿ.ಒ ಇಲಾಖೆಯ ಅಧಿಕಾರಿ ವಿದ್ಯಾ ವಸ್ತ್ರದ್, ಕಾರ್ಮಿಕ ಇಲಾಖೆಯ ಅಧಿಕಾರಿ ವಿಜಯಲಕ್ಷ್ಮಿ, ವಕೀಲರ ಸಂಘದ ಪದಾಧಿಕಾರಿಗಳು ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!