Saturday, July 27, 2024
HomeSidlaghattaವಿಧಾನಪರಿಷತ್‌ಗೆ Congress ಅಭ್ಯರ್ಥಿಯನ್ನು ಗೆಲ್ಲಿಸಿ ಕಳುಹಿಸಿ

ವಿಧಾನಪರಿಷತ್‌ಗೆ Congress ಅಭ್ಯರ್ಥಿಯನ್ನು ಗೆಲ್ಲಿಸಿ ಕಳುಹಿಸಿ

- Advertisement -
- Advertisement -
- Advertisement -
- Advertisement -

Sidlaghatta : ವಿಧಾನಪರಿಷತ್‌ನ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ನ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡಿ ಮತಯಾಚಿಸಲಿದ್ದು ಅವರಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸುವಂತೆ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ಮನವಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಜೂ 3ರಂದು ವಿಧಾನಪರಿಷತ್‌ ನ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಮತದಾನ ನಡೆಯಲಿದೆ. ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು ಶಿಡ್ಲಘಟ್ಟದಲ್ಲಿ ಎರಡು ದಿನಗಳೊಳಗೆ ಪ್ರವಾಸ ಮಾಡಿ ಶಿಕ್ಷಕ ಮತದಾರರಲ್ಲಿ ಮತ ಯಾಚಿಸಲಿದ್ದಾರೆ.

ಹೆಚ್ಚಿನ ಮತ ನೀಡಿ ಬಹುಮತದೊಂದಿಗೆ ಡಿ.ಟಿ.ಶ್ರೀನಿವಾಸ್ ಅವರನ್ನು ಗೆಲ್ಲಿಸಿ ವಿಧಾನಪರಿಷತ್‌ ಗೆ ಆಯ್ಕೆ ಮಾಡಿ ಕಳುಹಿಸಿದ್ದೇ ಆದಲ್ಲಿ ಅವರು ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಸಮಸ್ಯೆಗಳ ಕುರಿತು ಸದನದಲ್ಲಿ ಧ್ವನಿ ಎತ್ತಲಿದ್ದಾರೆ. ರಾಜ್ಯದಲ್ಲಿಯೂ ಕಾಂಗ್ರೆಸ್ ಪಕ್ಷದ ಸರ್ಕಾರವಿದ್ದು ಡಿ.ಟಿ.ಶ್ರೀನಿವಾಸ್ ಅವರು ಆಯ್ಕೆಯಾದರೆ ಹೆಚ್ಚಿನ ಅನುಕೂಲ ಆಗಲಿದೆ ಎಂದು ಹೇಳಿದರು.

ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಅವರು ಕಳೆದ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಡಿಮೆ ಮತಗಳ ಅಂತರದಿಂದ ಸೋತಿದ್ದರೂ ಪದವೀಧರರು, ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದೊಂದಿಗೆ ನಿಕಟ ಸಂಪರ್ಕ ಇಟ್ಟುಕೊಂಡು ಕಾರ್ಯನಿರ್ವಹಿಸುತ್ತಿರುವ ಕಾರಣ ಅವರಿಗೆ ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಗಂಭೀರ ಸಮಸ್ಯೆಗಳ ಅರಿವು ಇದೆ. ಅವರನ್ನು ಗೆಲ್ಲಿಸಿದರೆ ಉತ್ತಮ ಎಂದು ಆಶಿಸಿದರು.

For Daily Updates WhatsApp ‘HI’ to 7406303366

- Advertisement -
RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
- Advertisment -

Most Popular

error: Content is protected !!