
Sidlaghatta : ಶಿಡ್ಲಘಟ್ಟ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 7 ಸದಸ್ಯರು ಪಕ್ಷದ ವಿಪ್ ನಿಯಮವನ್ನು ಉಲ್ಲಂಘಿಸಿ ಜೆಡಿಎಸ್ ಅಭ್ಯರ್ಥಿಗಳಿಗೆ ಅಡ್ಡ ಮತದಾನ ಮಾಡಿದ್ದಾರೆ. ಇದರ ಮೇಲೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಏಪ್ರಿಲ್ 29 ರಂದು ಆದೇಶ ನೀಡಿದ್ದು, ಈ ಸದಸ್ಯರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು.
ಈ 7 ಮಂದಿ ಸದಸ್ಯರು ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟ್ ನ ನ್ಯಾಯಾಧೀಶರು ಈ ವಿಚಾರಣೆಯ ನಂತರ, ಜೂನ್ 3 ರವರೆಗೆ ಈ ಅನರ್ಹತೆಯ ಆದೇಶವನ್ನು ತಾತ್ಕಾಲಿಕವಾಗಿ ತಡೆ ಹಾಕಲು ಆದೇಶ ನೀಡಿದ್ದಾರೆ.
ಈ ಪ್ರಕರಣದ ಬಗ್ಗೆ ಕಾಂಗ್ರೆಸ್ನ ಜಿಲ್ಲಾಧ್ಯಕ್ಷ ಕೇಶವರೆಡ್ಡಿ ಮತ್ತು ನಗರಸಭೆ ಸದಸ್ಯ ಎಂ.ಶ್ರೀನಿವಾಸ್ ಅವರು ದೂರು ನೀಡಿದ್ದರು. ಈ ಸದಸ್ಯರು 3ನೇ, 10ನೇ, 11ನೇ, 16ನೇ, 22ನೇ, 28ನೇ ಹಾಗೂ 7ನೇ ವಾರ್ಡ್ಗಳನ್ನು ಪ್ರತಿನಿಧಿಸುತ್ತಿದ್ದಾರೆ.
ಈ ಪ್ರಕರಣದ ಮುಂದಿನ ವಿಚಾರಣೆಯು ಜೂನ್ 3 ರಂದು ನಡೆಯಲಿದೆ.