Home News ನೂತನ ಕೃಷಿ ಇಲಾಖೆ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ

ನೂತನ ಕೃಷಿ ಇಲಾಖೆ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ

0
Chikkaballapur APMC Agriculture Farmers Market Farmer Food Products Prices

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ವಾರದನಾಯಕನಹಳ್ಳಿ ಗೇಟ್ ಬಳಿ ಒಂದು ಕೋಟಿ ಇಪ್ಪತ್ತೈದು ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯ ನೂತನ ಕಟ್ಟಡಕ್ಕೆ ಗುರುವಾರ ಭೂಮಿ ಪೂಜೆ ಸಲ್ಲಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.

ನಗರದ ಸುತ್ತಲು ಕೆರೆ ಆವರಿಸಿರುವ ಕಾರಣ ನಗರದಲ್ಲಿ ಸ್ಥಳಾವಕಾಶ ಕೊರತೆ ಇದ್ದ ಕಾರಣ ಇಂದು ನಗರದ ಹೊರವಲಯದ ವರದನಾಯಕನಹಳ್ಳಿ ಗೇಟ್ ಬಳಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ನಿರ್ಮಾಣ ಮಾಡಲಾಗುತ್ತಿದೆ. ನಗರದ ಹೊರವಲಯದಲ್ಲಿ ನಿರ್ಮಿಸುತ್ತಿರುವ ಕಚೇರಿಯನ್ನು ನಿಗಧಿತ ಸಮಯದಲ್ಲಿ ನಿರ್ಮಿಸಿ ಕಾಮಗಾರಿ ಸಂಪೂರ್ಣಗೊಳಿಸಿ ಕೊಡಲಾಗುವುದೆಂದರು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ವರದನಾಯಕನಹಳ್ಳಿ ಸುತ್ತಮುತ್ತಲಿನ ಸರ್ಕಾರಿ ಜಾಗದಲ್ಲಿ ಅನುಭವದಲ್ಲಿರುವ ರೈತರ ಏಳು ಎಂಟು ಕೊಳವೆ ಬಾವಿಗಳಿದ್ದು ಅದಕ್ಕೆ ಪರಿಹಾರ ಕೊಡಿಸಬೇಕೆಂದು ಶಾಸಕರಿಗೆ ಮನವಿ ಮಾಡಿದರು.

ಎಇಇ ರಮೇಶ್, ಎಇ ವೆಂಕಟೇಶ್‍ಮೂರ್ತಿ, ಗುತ್ತಿಗೆದಾರ ನಾರಾಯಣಸ್ವಾಮಿ, ಲಿಖಿತ್, ಎಲ್ ಮಧು, ಎಸ್‍ಎಫ್‍ಸಿಎಸ್ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ಕರಗಪ್ಪ, ಮುತ್ತೂರು ವೆಂಕಟೇಶ್, ಹನುಮಂತಪುರ ವೆಂಕಟೇಶ್, ದೊಡ್ಡಪ್ಪ, ಬಾಂಬೆ ನವಾಜ್ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version