ಮತದಾರರ ಪಟ್ಟಿಯಿಂದ ರೈತರನ್ನು ಕೈಬಿಟ್ಟಿರುವುದರ ಹಿಂದೆ ರಾಜಕೀಯ ಹುನ್ನಾರ

- Advertisement -
- Advertisement -

Sidlaghatta : ಪಿಕಾರ್ಡ್ ಬ್ಯಾಂಕ್‌ನಲ್ಲಿ ಷೇರು ಮತ್ತು ಠೇವಣಿಗಳನ್ನಿಟ್ಟಿರುವ ರೈತರು ಮತದಾನದ ಹಕ್ಕು ಕಳೆದುಕೊಂಡಿರುವುದನ್ನು ಖಂಡಿಸಿ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಗುರುವಾರ ನಗರದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಅವರು, “ಬ್ಯಾಂಕ್‌ನ 6,150 ಷೇರುದಾರರು ಮತ್ತು ಠೇವಣಿದಾರರಲ್ಲಿ ಕೇವಲ 924 ಮಂದಿಗೆ ಮಾತ್ರ ಮತದಾನದ ಹಕ್ಕು ನೀಡಲಾಗಿದೆ. ಉಳಿದ 5,226 ಮಂದಿಯನ್ನು ಯಾವುದೇ ಮುನ್ಸೂಚನೆ ಇಲ್ಲದೆ ಮತದಾರರ ಪಟ್ಟಿಯಿಂದ ಕೈ ಬಿಡಲಾಗಿದೆ. ಇದು ರೈತ ವಿರೋಧಿ ರಾಜಕೀಯ ಹುನ್ನಾರವಾಗಿದೆ” ಎಂದು ಆರೋಪಿಸಿದರು.

ಮತದಾರರ ಪಟ್ಟಿಯಿಂದ ಕೈ ಬಿಡುವಾಗ ಕನಿಷ್ಠ ನೋಟೀಸ್ ನೀಡಬೇಕಾಗಿದ್ದರೂ, ಅದು ಮಾಡದ ಬ್ಯಾಂಕ್ ನ ಅಧಿಕಾರಿಗಳು ತಪ್ಪು ನಿರ್ಧಾರ ಕೈಗೊಂಡಿದ್ದಾರೆ. ಈ ವಿಷಯದಲ್ಲಿ ಹಿರಿಯ ಅಧಿಕಾರಿಗಳಿಂದ ತಕ್ಷಣ ತನಿಖೆ ನಡೆಸುವಂತೆ ಆಗ್ರಹಿಸಿದರು. ರೈತರ ಬಿಕ್ಕಟ್ಟನ್ನು ಪರಿಹರಿಸಬೇಕು ಮತ್ತು ತಪ್ಪು ಮಾಡಿದ್ದವರಿಗೆ ದಂಡ ವಿಧಿಸಬೇಕು ಎಂದರು.

ಸಭೆಯಲ್ಲಿ ಡಿವೈಎಸ್ಪಿ ಮುರಳೀಧರ್ ಮಾತನಾಡುತ್ತಾ, “ರೈತರು ನೋಟೀಸ್ ಪಡೆಯಲಿಲ್ಲ ಎಂದು ದೂರಿದ್ದಾರೆ, ಆದರೆ ಬ್ಯಾಂಕ್ ಅಧಿಕಾರಿಗಳು ನೋಟೀಸ್ ನೀಡಿ ಸ್ವೀಕೃತಿಯನ್ನು ಇಟ್ಟುಕೊಂಡಿದ್ದೇವೆ ಎಂದು ಹೇಳುತ್ತಿದ್ದಾರೆ. ಎರಡೂ ಪಕ್ಷಗಳಲ್ಲಿ ಗೊಂದಲ ಸ್ಪಷ್ಟಪಡಿಸಲು ಮತದಾರರ ಪಟ್ಟಿಯಿಂದ ಕೈ ಬಿಟ್ಟ ರೈತರಿಗೆ ನೋಟೀಸ್ ನೀಡಿದ ಬಗ್ಗೆ ದಾಖಲೆ ಪರಿಶೀಲಿಸಬೇಕಾಗಿದೆ. ನೋಟೀಸ್ ನೀಡದಿರುವುದು ಸಾಬೀತಾದರೆ, ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ” ಎಂದರು.

ಈ ಸಂಬಂಧ ಗುರುವಾರ ಮದ್ಯಾಹ್ನ 12 ಗಂಟೆಗೆ ಮತ್ತೆ ರೈತರ ಮತ್ತು ಬ್ಯಾಂಕ್ ಅಧಿಕಾರಿಗಳ ಸಭೆ ಆಯೋಜಿಸಲಾಗುವುದು. ಈ ಸಭೆಯಲ್ಲಿ ರೈತರಿಗೆ ಸಮಗ್ರ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದರು.

ಅಧಿಕಾರಿಗಳ ಭರವಸೆಯನ್ನು ಆಧರಿಸಿ ರೈತರು ತಾತ್ಕಾಲಿಕವಾಗಿ ಪ್ರತಿಭಟನೆವನ್ನು ಹಿಂದಕ್ಕೆ ಪಡೆದರು.

ಸಭೆಯಲ್ಲಿ ಪಿಕಾರ್ಡ್ ಬ್ಯಾಂಕ್‌ನ ವ್ಯವಸ್ಥಾಪಕ ಶ್ರೀನಾಥ್, ಸರ್ಕಲ್ ಇನ್ಸ್‌ಪೆಕ್ಟರ್ ಶ್ರೀನಿವಾಸ್, ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ವೀರಾಪುರ ಮುನಿನಂಜಪ್ಪ, ವೇಣುಗೋಪಾಲ್, ಎ.ರಾಮಚಂದ್ರಪ್ಪ ಸೇರಿದಂತೆ ಅನೇಕರು ಪಾಲ್ಗೊಂಡರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!