30.4 C
Bengaluru
Thursday, February 13, 2025

ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪುಣ್ಯ ಸ್ಮರಣೆ

- Advertisement -
- Advertisement -

Kothanur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಕೊತ್ತನೂರಿನಲ್ಲಿ ವೀರಶೈವ ಲಿಂಗಾಯತ ಬಳಗದ ಆಶ್ರಯದಲ್ಲಿ ಮಂಗಳವಾರ ಶ್ರೀ ಶಿವಕುಮಾರ ಮಹಾಸ್ವಾಮಿಗಳ ದಾಸೋಹ ದಿನ ಹಾಗೂ ಪುಣ್ಯ ಸ್ಮರಣೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಶ್ರೀ ಶಿವಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿ ಮಹಾಸ್ವಾಮಿಗಳಿಗೆ ರುದ್ರಾಭಿಷೇಕ ಸೇವೆ ಸಲ್ಲಿಸಿದ ನಂತರ, ಅವರ ಭಾವಚಿತ್ರದೊಂದಿಗೆ ಜಾನಪದ ತಂಡದ ವೀರಗಾಸೆ ಸಹಿತ ಶರಣ ಭಕ್ತಾದಿಗಳು ಭಾವಪೂರ್ಣ ಮೆರವಣಿಗೆ ನಡೆಸಿದರು. ಈ ಮೆರವಣಿಗೆಯು ದೇವಾಲಯದಿಂದ ಊರಿನ ಪ್ರಮುಖ ಬೀದಿಗಳ ಮೂಲಕ ಸಾಗಿತು.

ಕಾರ್ಯಕ್ರಮದ ಅಂಗವಾಗಿ ಶ್ರೀ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಭಕ್ತಾದಿಗಳಿಗಾಗಿ ಅನ್ನದಾಸೋಹವನ್ನು ಆಯೋಜಿಸಲಾಯಿತು.

ಈ ದಿವ್ಯಚಟುವಟಿಕೆಯಲ್ಲಿ ಗ್ರಾಮಸ್ಥರು, ವೀರಶೈವ ಲಿಂಗಾಯತ ಸಮುದಾಯದ ಸದಸ್ಯರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!