Home News Bagepalli ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

0
517
Traffic Rules awareness program

Bagepalli : ಬಾಗೇಪಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಸಂಚಾರ ನಿಯಮ (Traffic Rules)ಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಪೊಲೀಸ್ ಇನ್‌ಸ್ಪೆಕ್ಟರ್ ಡಿ.ಆರ್.ನಾಗರಾಜ್ ” ಯುವ ಪೀಳಿಗೆ ದುಶ್ಚಟಗಳಿಂದ ದೂರ ಇರಬೇಕು. ಸಮಾಜದಲ್ಲಿ ನಡೆಯುತ್ತಿರುವ ಕೆಲ ಅನೈತಿಕ ಹಾಗೂ ಸಾಮಾಜಘಾತಕ ಚಟುವಟಿಕೆಗಳನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರ ಅಗತ್ಯ, ಯಾವುದೇ ರೀತಿಯಾದ ಸಮಾಜಘಾತಕ ಚಟುವಟಿಕೆಗಳು ಕಂಡುಬಂದರೆ ಸಾರ್ವಜನಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು, ಆಗ ಮುಂದಾಗುವ ಅನಾಹುತಗಳನ್ನು ತಡೆಯಬಹುದು ” ಎಂದು ಹೇಳಿದರು.

ವಾಹನ ಚಲಾವಣೆ ಮಾಡುವಾಗ ಜಾಗರೂಕತೆಯಿಂದ ಇರಬೇಕು, ಆಕಸ್ಮಿಕ ದುರ್ಘಟನೆಗಳನ್ನು ತಪ್ಪಿಸಲು ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ವೈ.ನಾರಾಯಣ ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಕೆ.ಎಂ.ನಯಾಜ್ ಅಹಮದ್, ಪ್ರಾಧ್ಯಾಪಕ ಡಾ.ಬಿ.ಎನ್.ಪ್ರಭಾಕರ್, ಗ್ರಂಥಪಾಲಕ ಡಾ.ಸಿ.ಎಸ್.ವೆಂಕಟರಾಮರೆಡ್ಡಿ, ಎಲ್.ಶ್ರೀನಿವಾಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!